ವಿಜಯಪುರ- ದ್ವಿಚಕ್ರ ವಾಹನ ಸರ್ವಿಸ್ ಮಾಡುವ ಅಂಗಡಿ ಬೆಂಕಿಗೆ ಹೊತ್ತಿ ಉರಿದ ಘಟನೆ ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ನಡೆದಿದೆ.ದಶರಥ ಲೋಣಿ ಎಂಬುವವರಿಗೆ ಸೇರಿದ ಅಂಗಡಿ ಬೆಂಕಿಗಾಹುತಿ ಯಾಗಿದ್ದು,ಅಂದಾಜು ಎರಡರಿಂದ ಮೂರು ಲಕ್ಷ ಮೌಲ್ಯದ ರಿಪೇರಿಗೆ ಬಂದಿರುವ ವಾಹನ ಬೆಂಕಿಗಾಹುತಿ ಆಗಿವೆ.
ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೋಲಿಸ್ ಸಿಬ್ಬಂದಿ ಬಂದಿದ್ದು, ಬೆಂಕಿನಂದಿಸಲು ಹರಸಾಹಸ ಪಡುತ್ತಿದ್ದಾರೆ.ಇನ್ನು ಶಾರ್ಟ ಸರ್ಕ್ಯೂಟ್ ನಿಂದ ಬೆಂಕಿ ತಗುಲಿರುವ ಸಾದ್ಯತೆ ಇದೆ ಎನ್ನಲಾಗಿದ್ದು,ಆಲಮೇಲ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.