ಹುಬ್ಬಳ್ಳಿ- ಸಂಯುಕ್ತ ಕಿಸಾನ ಮೋರ್ಚಾ ರಾಷ್ಟ್ರೀಯ ನಾಯಕ ರಾಕೇಶ ಟಿಕಾಯತ್ ಅವರ ಮೇಲೆ ರಾಜಸ್ತಾನದ ಅಲ್ವಾರದಲ್ಲಿ ನಡೆದ ಗುಂಡಿನ ದಾಳಿಯನ್ನು ಖಂಡಿಸಿ ಪ್ರತಿಭಟನೆ ನಡೆಸಲಾಯಿತು. ಇದೇ ವೇಳೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತ ವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕೆಂದು, ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮೀತ ವತಿಯಿಂದ ನಗರದ ತಹಶೀಲ್ದಾರ ಕಚೇರಿ ಎದುರಿಗೆ ಪ್ರತಿಭಟನೆ ಮಾಡಿದ್ರು. ಗುಂಡಿನ ದಾಳಿ ಮಾಡಿದವರನ್ನು ಬಂಧಿಸಬೇಕೆಂದು ತಹಶೀಲ್ದಾರರ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.
Sandesh Pawar